Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಕಾಣೆಯಾದವರ ಬಗ್ಗೆ ಪ್ರಕಟಣೆ` ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಮೊದಲ ಹಂತದ ಚಿತ್ರೀಕರಣ ಪೂರ್ಣ
Posted date: 16 Mon, Sep 2019 – 09:32:05 AM

ಬಿಲ್ವ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ನವೀನ್ ಕುಮಾರ್ ಜಿ.ಆರ್ ಅವರು ನಿರ್ಮಿಸುತ್ತಿರುವ ‘ಕಾಣೆಯಾದವರ ಬಗ್ಗೆ ಪ್ರಕಟಣೆ‘ ಚಿತ್ರದ ಮೊದಲ ಹಂತದ ಚಿತ್ರೀಕರಣ ಬ್ಯಾಂಕಾಕ್‌ನಲ್ಲಿ ಮುಕ್ತಾಯವಾಗಿದೆ. ಮಾತಿನ ಭಾಗ ಹಾಗೂ ಒಂದು ಹಾಡಿನ ಚಿತ್ರೀಕರಣ ಬ್ಯಾಂಕಾಕ್‌ನಲ್ಲಿ 23 ದಿನಗಳ ಕಾಲ  ನಡೆದಿದೆ. ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ರವಿಶಂಕರ್, ರಂಗಾಯಣ ರಘು, ಚಿಕ್ಕಣ್ಣ, ತಬಲನಾಣಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಈ ಹಿಂದೆ ‘ಶಕ್ತಿ‘, ‘ದಿಲ್‌ವಾಲ‘, ‘ಕೃಷ್ಣ ರುಕ್ಕು‘, ‘ರ‍್ಯಾಂಬೋ 2‘ ‘ಕಿರಾತಕ 2‘, ದಾರಿ ತಪ್ಪಿದ ಮಗ‘ ಸೇರಿದಂತೆ ಆರು ಚಿತ್ರಗಳ ನಿರ್ದೇಶಕರಾಗಿರುವ ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರ ನಿರ್ದೇಶನದ ಏಳನೇ ಚಿತ್ರ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಅನಿಲ್ ಕುಮಾರ್ ಅವರೆ ಬರೆದಿದ್ದಾರೆ.
65 ವರ್ಷ ಮೇಲ್ಪಟವರ (ಹಿರಿಯ ನಾಗರಿಕರ) ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರವಿಶಂಕರ್, ರಂಗಾಯಣ ರಘು, ತಬಲನಾಣಿ, ಚಿಕ್ಕಣ್ಣ ಅಭಿನಯಿಸುತ್ತಿದ್ದಾರೆ.  

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಶಿವಕುಮಾರ್ ಬಿ.ಕೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.  

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಕಾಣೆಯಾದವರ ಬಗ್ಗೆ ಪ್ರಕಟಣೆ` ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಮೊದಲ ಹಂತದ ಚಿತ್ರೀಕರಣ ಪೂರ್ಣ - Chitratara.com
Copyright 2009 chitratara.com Reproduction is forbidden unless authorized. All rights reserved.