ಕವನ ಪಿಕ್ಚರ್ಸ್ ಲಾಂಛನದಲ್ಲಿ ಬಿ.ಹನುಮಂತರಾಜು ಅವರು ನಿರ್ಮಿಸಿರುವ ‘ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅಶೋಕ್ ಕಡಬ ನಿರ್ದೇಶನದ ಈ ಚಿತ್ರಕ್ಕೆ ಕಾರ್ತಿಕ್ ವೆಂಕಟೇಶ್ ಸಂಗೀತ ನೀಡಿದ್ದಾರೆ. ಅರುಣ್ ಕುಮಾರ್ ಛಾಯಾಗ್ರಹಣ ಹಾಗೂ ಅರುಣ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ನಂದೀಶ್ ಕುಮಾರ್, ಸಂಹಿತ ವಿನ್ಯಾ, ವಿನ್ನಿ ಫ಼ರ್ನಾಂಡಿಸ್ ಮುಂತಾದವರಿದ್ದಾರೆ