Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಇತ್ಯಾದಿ` ಮರ್ಡರ್ ಮಿಸ್ಟ್ರಿ ಕ್ರೈಂ ಥ್ರಿಲ್ಲರ್
Posted date: 22 Mon, Apr 2024 01:14:16 PM
`ಇತ್ಯಾದಿ` ಚಿತ್ರಕ್ಕೆ ಚರಣ್‌ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ.
 
ಸಿನಿಮಾಗೆ ನಿರ್ದೇಶನ ಮಾಡಿರುವ ಡಿ.ಯೋಗರಾಜ್ ಹೇಳುವಂತೆ ಇದೊಂದು ಮರ್ಡರ್ ಮಿಸ್ಟ್ರಿ ಕ್ರೈಂ ಥ್ರಿಲ್ಲರ್ ಕಥೆಯನ್ನು ಒಳಗೊಂಡಿದೆ. ಶೇಕಡ ೭೫ರಷ್ಟು ಕಾಲ್ಪನಿಕ, ಉಳಿದವು ಸತ್ಯ ಘಟನೆಯಾಗಿರುತ್ತದೆ. ಶೃಂಗೇರಿ ಬಳಿ ಇರುವ ಬಿಳಿಗದ್ದೆ ಎಂಬ ಊರಿನಲ್ಲಿ ಕಲ್ಲು ದೇವರು ಇರುತ್ತದೆ. ಅದಕ್ಕೆ ತಾಯಿ ಹೊಟ್ಟೆಯಲ್ಲಿ ಹುಟ್ಟಬೇಕೆಂಬ ಆಸೆಯಾಗಿರುತ್ತದೆ. ಅದು ಕೊನೆಗೂ ಕಲ್ಲಾಗೇ ಹುಟ್ಟಿಕೊಂಡಿರುತ್ತದೆ. ಊರಿನಲ್ಲಿರುವ ಗರ್ಭಣಿಯರು ಆ ಜಾಗಕ್ಕೆ ಹೋಗಿ ಪೂಜೆ ಮಾಡಿಕೊಂಡು ಬಂದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇರುತ್ತದೆ. ಆದರೆ ಅಲ್ಲಿಗೆ ಹೋದವರೆಲ್ಲಾ ಕೊಲೆಯಾಗುತ್ತಿರುತ್ತಾರೆ. ಇದನ್ನು ಮಾಡುವವರು ಯಾರು? ಯಾಕೆ ನಡೀತಾ ಇದೆ? ಎಂಬುದನ್ನು ಕುತೂಹಲಕಾರಿಯಾಗಿ ತೋರಿಸಲಾಗಿದೆ. ಶೃಂಗೇರಿ, ಚಿಕ್ಕಮಗಳೂರು, ಆಗುಂಬೆ ಸುಂದರ ತಾಣಗಳಲ್ಲಿ 62 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಅಂತ ಮಾಹಿತಿ ತೆರೆದಿಟ್ಟರು.

ಸಚ್ಚಿನ್ ನಾಯಕ. ಡಾ.ಸೌಮ್ಯ ನಾಯಕಿ. ಮತ್ತೋಂದು ಮುಖ್ಯ ಪಾತ್ರದಲ್ಲಿ ಮಹೇಶ್.ಬಿ., ಅರ್ಚನಾಉದಯಕುಮಾರ್. ತಾರಾಗಣದಲ್ಲಿ ಆಂಜನಪ್ಪ, ತಮಿಳು ಖ್ಯಾತ ನಟ ಶಿವರಾಜ್, ಮಂಜುಳಾವೆಂಕಟೇಶ್,ಮಣಿ ಮುಂತಾದವರು ನಟಿಸಿದ್ದಾರೆ. ಎರಡು ಹಾಡುಗಳಿಗೆ ಸಂಗೀತ ಪುಣ್ಯೇಶ್, ಛಾಯಾಗ್ರಹಣ ಭರಣಿ-ಡಿ.ಯೋಗರಾಜ್-ಲಕ್ಷೀಕಾಂತ್, ಸಂಕಲನ ಸಂತೋಷ್ ನಿರ್ವಹಿಸಿದ್ದಾರೆ. ಸೆನ್ಸಾರ್‌ನಿಂದ ಪ್ರಶಂಸೆಗೆ ಒಳಪಟ್ಟಿರುವ ಸಿನಿಮಾವು ಇದೇ ತಿಂಗಳು ತೆರೆ ಕಾಣಲಿದೆ.

`ಇತ್ಯಾದಿ` ಚಿತ್ರಕ್ಕೆ ಚರಣ್‌ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ.
 
ಸಿನಿಮಾಗೆ ನಿರ್ದೇಶನ ಮಾಡಿರುವ ಡಿ.ಯೋಗರಾಜ್ ಹೇಳುವಂತೆ ಇದೊಂದು ಮರ್ಡರ್ ಮಿಸ್ಟ್ರಿ ಕ್ರೈಂ ಥ್ರಿಲ್ಲರ್ ಕಥೆಯನ್ನು ಒಳಗೊಂಡಿದೆ. ಶೇಕಡ ೭೫ರಷ್ಟು ಕಾಲ್ಪನಿಕ, ಉಳಿದವು ಸತ್ಯ ಘಟನೆಯಾಗಿರುತ್ತದೆ. ಶೃಂಗೇರಿ ಬಳಿ ಇರುವ ಬಿಳಿಗದ್ದೆ ಎಂಬ ಊರಿನಲ್ಲಿ ಕಲ್ಲು ದೇವರು ಇರುತ್ತದೆ. ಅದಕ್ಕೆ ತಾಯಿ ಹೊಟ್ಟೆಯಲ್ಲಿ ಹುಟ್ಟಬೇಕೆಂಬ ಆಸೆಯಾಗಿರುತ್ತದೆ. ಅದು ಕೊನೆಗೂ ಕಲ್ಲಾಗೇ ಹುಟ್ಟಿಕೊಂಡಿರುತ್ತದೆ. ಊರಿನಲ್ಲಿರುವ ಗರ್ಭಣಿಯರು ಆ ಜಾಗಕ್ಕೆ ಹೋಗಿ ಪೂಜೆ ಮಾಡಿಕೊಂಡು ಬಂದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇರುತ್ತದೆ. ಆದರೆ ಅಲ್ಲಿಗೆ ಹೋದವರೆಲ್ಲಾ ಕೊಲೆಯಾಗುತ್ತಿರುತ್ತಾರೆ. ಇದನ್ನು ಮಾಡುವವರು ಯಾರು? ಯಾಕೆ ನಡೀತಾ ಇದೆ? ಎಂಬುದನ್ನು ಕುತೂಹಲಕಾರಿಯಾಗಿ ತೋರಿಸಲಾಗಿದೆ. ಶೃಂಗೇರಿ, ಚಿಕ್ಕಮಗಳೂರು, ಆಗುಂಬೆ ಸುಂದರ ತಾಣಗಳಲ್ಲಿ 62 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಅಂತ ಮಾಹಿತಿ ತೆರೆದಿಟ್ಟರು.

ಸಚ್ಚಿನ್ ನಾಯಕ. ಡಾ.ಸೌಮ್ಯ ನಾಯಕಿ. ಮತ್ತೋಂದು ಮುಖ್ಯ ಪಾತ್ರದಲ್ಲಿ ಮಹೇಶ್.ಬಿ., ಅರ್ಚನಾಉದಯಕುಮಾರ್. ತಾರಾಗಣದಲ್ಲಿ ಆಂಜನಪ್ಪ, ತಮಿಳು ಖ್ಯಾತ ನಟ ಶಿವರಾಜ್, ಮಂಜುಳಾವೆಂಕಟೇಶ್,ಮಣಿ ಮುಂತಾದವರು ನಟಿಸಿದ್ದಾರೆ. ಎರಡು ಹಾಡುಗಳಿಗೆ ಸಂಗೀತ ಪುಣ್ಯೇಶ್, ಛಾಯಾಗ್ರಹಣ ಭರಣಿ-ಡಿ.ಯೋಗರಾಜ್-ಲಕ್ಷೀಕಾಂತ್, ಸಂಕಲನ ಸಂತೋಷ್ ನಿರ್ವಹಿಸಿದ್ದಾರೆ. ಸೆನ್ಸಾರ್‌ನಿಂದ ಪ್ರಶಂಸೆಗೆ ಒಳಪಟ್ಟಿರುವ ಸಿನಿಮಾವು ಇದೇ ತಿಂಗಳು ತೆರೆ ಕಾಣಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಇತ್ಯಾದಿ` ಮರ್ಡರ್ ಮಿಸ್ಟ್ರಿ ಕ್ರೈಂ ಥ್ರಿಲ್ಲರ್ - Chitratara.com
Copyright 2009 chitratara.com Reproduction is forbidden unless authorized. All rights reserved.