Chief Editor
Manohar. R (Manu)
Photo Journalist
chitrataramanu@gmail.com
+91 9845549026
ಒಲವ ಗೀತೆ ಹಾಡಿದ `ಕಲಾಕಾರ್`
Posted date: 31/December/2008

ಸುಂದರ ಹರೀಶ್‌ರಾಜ್ ಅಭಿನಯದ `ಕಲಾಕಾರ್` ಚಿತ್ರಕ್ಕೆ ನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಇತ್ತೀಚೆಗೆ ಸ್ಯಾಂಕಿರಸ್ತೆ, ಬ್ರಿಗೇಡ್‌ರಸ್ತೆ. ಮಹಾತ್ಮಗಾಂಧಿರಸ್ತೆಗಳಲ್ಲಿ ಚಿತ್ರದ

`ಮನಸೆ ಯಾವ ರಾಗದಲ್ಲಿ ನಾ ಹಾಡಲಿ, ಒಲವ ಗೀತೆಯ. .

ಎಂಬ ಗೀತೆ ಚಿತ್ರೀಕೃತವಾಯಿತು. ವಿ.ಮನೋಹರ್ ಬರೆದಿರುವ ಈ ಗೀತೆಯನ್ನು ಸೂರ್ಯ ಮೂಡುವ ಹಾಗೂ ಮುಳುಗುವ ಸಮಯದ ಸುಂದರ ವಾತಾವರಣದಲ್ಲಿ ಛಾಯಾಗ್ರಾಹಕ ಎಚ್.ಎಂ.ರಾಮಚಂದ್ರ ಸೆರೆಹಿಡಿದಿದ್ದಾರೆ. ಮಂಗಳ ಮತ್ತು ರಾಜೇಶ್‌ಕೃಷ್ಣನ್ ಹಾಡಿರುವ ಈ ಗೀತೆಯ ಚಿತ್ರೀಕರಣದಲ್ಲಿ ನಾಯಕ ಹರೀಶ್‌ರಾಜ್ ಹಾಗೂ ರಾಧಿಕಾಗಾಂಧಿ ಭಾಗವಹಿಸಿದ್ದರು.

   ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಹರೀಶ್‌ರಾಜ್ ದಿ ಬೆಂಗಳೂರು ಕಂಪನಿ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವುದ್ದಲ್ಲದೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ನಿರ್ದೇಶಕರೇ ಚಿತ್ರಕ್ಕೆ ಕತೆ, ಚಿತ್ರಕತೆಯನ್ನೂ ಬರೆದಿದ್ದಾರೆ. ಗಿರಿಧರ್ ದಿವಾನ್ ಸಂಗೀತ, ಎಚ್.ಎಂ.ರಾಮಚಂದ್ರ ಛಾಯಾಗ್ರಹಣ, ಶ್ರೀ(ಕ್ರೇಜಿ ಮೈಂಡ್ಸ್) ಸಂಕಲನವಿರುವ ಚಿತ್ರದ ತಾರಾಬಳಗದಲ್ಲಿ ಹರೀಶ್‌ರಾಜ್, ಸುಮನ್‌ರಂಗನಾಥ್, ರಾಧಿಕಾಗಾಂಧಿ, ಸುಧಾನರಸಿಂಹರಾಜು, ಅವಿನಾಶ್(ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ), ರಾಜಾರಾವ್, ವಿಶ್ವ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಒಲವ ಗೀತೆ ಹಾಡಿದ `ಕಲಾಕಾರ್` - Chitratara.com
Copyright 2009 chitratara.com Reproduction is forbidden unless authorized. All rights reserved.