ಯು.ಎಂ.ಡ್ರೀಮ್ಸ್ ಮೂವೀಸ್ ಸಂಸ್ಥೆ ಲಾಂಛನದಲ್ಲಿ ಮಹೇಶ್ ಆನೇಕಲ್ ಅವರು ನಿರ್ಮಿಸುತ್ತಿರುವ ‘ಮನದ ಮರೆಯಲ್ಲಿ’ ಚಿತ್ರಕ್ಕೆ ನಾರಾಯಣ ನೇತ್ರಾಲಯದಲ್ಲಿ ಕೆಲವು ಸನ್ನಿವೇಶಗಳ ಚಿತ್ರೀಕರಣ ನಡೆಯಿತು. ಅನಂತನಾಗ್, ಶ್ರೀಕಾಂತ್, ವಿಂಧ್ಯಾ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಡಾ:ರಾಜಕುಮಾರ್ ಅವರು ನೇತ್ರದಾನದ ಬಗ್ಗೆ ಹೇಳುತ್ತಿದ್ದ ಮಾತುಗಳು ಈ ಚಿತ್ರ ನಿರ್ಮಾಣಕ್ಕೆ ಕಾರಣ ಎನ್ನುತ್ತಾರೆ ನಿರ್ದೇಶಕ ಎ.ಎಚ್.ರಾಜೀವ್ನೇತ್ರ. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಸಹಾಯಕರಾಗಿದ್ದ ರಾಜೀವ್ ಅವರಿಗೆ ಇದು ಚೊಚ್ಚಲ ಚಿತ್ರ.
‘ಒಲವೇ ಮಂದಾರ’ದ ಶ್ರೀಕಾಂತ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ವಿಂಧ್ಯಾ ಈ ಚಿತ್ರದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಖ್ಯಾತ ನಟ ಅನಂತಾನಾಗ್ ವಿಶೇಷಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನವೀನ್ಸುವರ್ಣ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಎಂ.ಎಸ್.ತ್ಯಾಗರಾಜ್ ಸಂಗೀತ ನೀಡುತ್ತಿದ್ದಾರೆ. ಎಂ.ಯೋಗೇಂದ್ರ ನೃತ್ಯ ನಿರ್ದೇಶನ ಹಾಗೂ ಎನ್.ಕೆ.ಕುಮಾರ್ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಬೆಂಗಳೂರು, ಮಡಿಕೇರಿಯಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.