Chief Editor
Manohar. R (Manu)
Photo Journalist
chitrataramanu@gmail.com
+91 9845549026
ನಾರಾಯಣ ನೇತ್ರಾಲಯದಲ್ಲಿ ?ಮನದ ಮರೆಯಲ್ಲಿ
Posted date: 21 Wed, Nov 2012 ? 03:19:15 PM

 ಯು.ಎಂ.ಡ್ರೀಮ್ಸ್ ಮೂವೀಸ್ ಸಂಸ್ಥೆ ಲಾಂಛನದಲ್ಲಿ ಮಹೇಶ್ ಆನೇಕಲ್ ಅವರು ನಿರ್ಮಿಸುತ್ತಿರುವ ‘ಮನದ ಮರೆಯಲ್ಲಿ’ ಚಿತ್ರಕ್ಕೆ ನಾರಾಯಣ ನೇತ್ರಾಲಯದಲ್ಲಿ ಕೆಲವು ಸನ್ನಿವೇಶಗಳ ಚಿತ್ರೀಕರಣ ನಡೆಯಿತು.  ಅನಂತನಾಗ್, ಶ್ರೀಕಾಂತ್, ವಿಂಧ್ಯಾ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
     ಡಾ:ರಾಜಕುಮಾರ್ ಅವರು ನೇತ್ರದಾನದ ಬಗ್ಗೆ ಹೇಳುತ್ತಿದ್ದ ಮಾತುಗಳು ಈ ಚಿತ್ರ ನಿರ್ಮಾಣಕ್ಕೆ ಕಾರಣ ಎನ್ನುತ್ತಾರೆ ನಿರ್ದೇಶಕ ಎ.ಎಚ್.ರಾಜೀವ್‌ನೇತ್ರ. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಸಹಾಯಕರಾಗಿದ್ದ ರಾಜೀವ್ ಅವರಿಗೆ ಇದು ಚೊಚ್ಚಲ ಚಿತ್ರ.
     ‘ಒಲವೇ ಮಂದಾರ’ದ ಶ್ರೀಕಾಂತ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ವಿಂಧ್ಯಾ ಈ ಚಿತ್ರದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಖ್ಯಾತ ನಟ ಅನಂತಾನಾಗ್ ವಿಶೇಷಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನವೀನ್‌ಸುವರ್ಣ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಎಂ.ಎಸ್.ತ್ಯಾಗರಾಜ್ ಸಂಗೀತ ನೀಡುತ್ತಿದ್ದಾರೆ. ಎಂ.ಯೋಗೇಂದ್ರ ನೃತ್ಯ ನಿರ್ದೇಶನ ಹಾಗೂ ಎನ್.ಕೆ.ಕುಮಾರ್ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಬೆಂಗಳೂರು, ಮಡಿಕೇರಿಯಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ನಾರಾಯಣ ನೇತ್ರಾಲಯದಲ್ಲಿ ?ಮನದ ಮರೆಯಲ್ಲಿ - Chitratara.com
Copyright 2009 chitratara.com Reproduction is forbidden unless authorized. All rights reserved.