ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಚಾರ್ಮಿನಾರ್ ಚಿತ್ರಕ್ಕೆ ಗುರುಕಿರಣ್ ಸ್ಟುಡಿಯೋದಲ್ಲಿ ಹಿನ್ನಲೆ ಸಂಗೀತ ಅಳವಡಿಸಲಾಗುತ್ತಿದೆ. ಹರಿ ಸಂಗೀತ ನಿರ್ದೇಶಕರಾಗಿರುವ ಈ ಚಿತ್ರಕ್ಕೆ ಹಿನ್ನಲೆ ಸಂಗೀತವನ್ನು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅಳವಡಿಸುತ್ತಿದ್ದಾರೆ.
‘ತಾಜ್ಮಹಲ್, ‘ಪ್ರೇಮ್ಕಹಾನಿ, ‘ಮೈಲಾರಿ ಚಿತ್ರಗಳ ನಂತರ ಆರ್.ಚಂದ್ರು ‘ಚಾರ್ಮಿನಾರ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಆರ್.ಚಂದ್ರು ಈ ಚಿತ್ರದ ನಿರ್ಮಾಪಕರು ಹೌದು.
ಕೆ.ಎಸ್.ಚಂದ್ರಶೇಖರ್ ಈ ಚಿತ್ರಕ್ಕೆ ಥ್ರಿಲ್ಲರ್ಮಂಜು ಅವರ ಸಾಹಸ ನಿರ್ದೇಶನವಿದೆ. ಇಮ್ರಾನ್, ಹರ್ಷ, ರಘು ನೃತ್ಯ ನಿರ್ದೇಶನವಿರುವ ‘ಚಾರ್ಮಿನಾರ್ ಚಿತ್ರದ ನಾಯಕರಾಗಿ ಲವ್ಲಿಸ್ಟಾರ್ ಪ್ರೇಮ್ ಅಭಿನಯಿಸುತ್ತಿದ್ದಾರೆ. ಮೇಘನಾ, ಕುಮುದ ನಾಯಕಿಯರಾಗಿರುವ ಈ ಚಿತ್ರದ ತಾರಾಬಳಗದಲ್ಲಿ ರಂಗಾಯಣ ರಘು, ಸಾಧುಕೋಕಿಲಾ, ಬುಲೆಟ್ ಪ್ರಕಾಶ್, ಸುಧಾ ಬೆಳವಾಡಿ, ಹೊನ್ನವಳ್ಳಿ ಕೃಷ್ಣ ಮುಂತಾದವರಿದ್ದಾರೆ.