ನಾಯಕ ಹಾಗು ನಾಯಕಿ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವ ಸನ್ನಿವೇಶವನ್ನು ಯು.ಎಂ.ಡ್ರೀಮ್ಸ್ ಮೂವೀಸ್ ಸಂಸ್ಥೆ ಲಾಂಛನದಲ್ಲಿ ಮಹೇಶ್ ಅನೇಕಲ್ ಅವರು ನಿರ್ಮಿಸುತ್ತಿರುವ ‘ಮನದ ಮರೆಯಲ್ಲಿ’ ಚಿತ್ರಕ್ಕಾಗಿ ನಿರ್ದೇಶಕ ರಾಜೀವ್ನೇತ್ರ ಮಹಾಲಕ್ಷ್ಮೀ ಲೇಔಟ್ನ ಆಂಜನೇಯ ದೇವಸ್ಥಾನ ಚಿತ್ರಿಸಿಕೊಂಡರು. ಶ್ರೀಕಾಂತ್ ಹಾಗೂ ವಿಂಧ್ಯಾ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಡಾ:ರಾಜಕುಮಾರ್ ಅವರು ನೇತ್ರದಾನದ ಬಗ್ಗೆ ಹೇಳುತ್ತಿದ್ದ ಮಾತುಗಳ ಸ್ಪೂರ್ತಿಯಿಂದ ಈ ಚಿತ್ರ ನಿರ್ಮಾಣವಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಎ.ಎಚ್.ರಾಜೀವ್ನೇತ್ರ.
‘ಒಲವೇ ಮಂದಾರ’ದ ಶ್ರೀಕಾಂತ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ವಿಂಧ್ಯಾ. ಖ್ಯಾತ ನಟ ಅನಂತಾನಾಗ್ ವಿಶೇಷಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನವೀನ್ಸುವರ್ಣ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಎಂ.ಎಸ್.ತ್ಯಾಗರಾಜ್ ಸಂಗೀತ ನೀಡುತ್ತಿದ್ದಾರೆ. ಎಂ.ಯೋಗೇಂದ್ರ ನೃತ್ಯ ನಿರ್ದೇಶನ ಹಾಗೂ ಎನ್.ಕೆ.ಕುಮಾರ್ ಕಲಾ ನಿರ್ದೇಶನ ‘ಮನದ ಮರೆಯಲ್ಲಿ’ ಚಿತ್ರಕ್ಕಿದೆ.