Chief Editor
Manohar. R (Manu)
Photo Journalist
chitrataramanu@gmail.com
+91 9845549026
`ದಿಲ್‌ರಂಗೀಲಾ`ಗೆ ಅದ್ದೂರಿ ಗೀತೆ
Posted date: 10 Thu, Oct 2013 – 08:27:29 AM

ಕೆ.ಮಂಜು ಸಿನಿಮಾಸ್ ಲಾಂಛನದಲ್ಲಿ ಕೆ.ಮಂಜು ಅವರು ನಿರ್ಮಿಸುತ್ತಿರುವ ‘ದಿಲ್‌ರಂಗೀಲಾ ಚಿತ್ರಕ್ಕಾಗಿ ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ಅರ್ಲಿ ಮಾರ್ನಿಂಗು ಬೀಚ್‌ಗೆ ಬಂದು ಬಿಡಿ ಎಂಬ ಹಾಡಿನ ಚಿತ್ರೀಕರಣ ಗೋವಾದಲ್ಲಿ ನಡೆದಿದೆ. ಮೂವತ್ತೈದು ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಮೂಡಿ ಬಂದಿರುವ ಈ ಹಾಡಿನ ಚಿತ್ರೀಕರಣದಲ್ಲಿ ಗಣೇಶ್, ರಚಿತಾರಾಂ ಹಾಗೂ ರಷ್ಯನ್ ನರ್ತಕರು ಅಭಿನಯಿಸಿದ್ದರು. ಐದು ದಿನಗಳ ಕಾಲ ಚಿತ್ರೀಕರಣಗೊಂಡ ಈ ಹಾಡಿಗೆ ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಮಾಡಿದ್ದಾರೆ.
   ಗೋಲ್ಡನ್‌ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಪ್ರೀತಂಗುಬ್ಬಿ ನಿರ್ದೇಶಿಸುತ್ತಿದ್ದಾರೆ. ರಚಿತರಾಂ, ಪ್ರಿಯಾಂಕರಾವ್, ದತ್ತಣ್ಣ, ರಂಗಾಯಣರಘು, ಅಚ್ಯುತಕುಮಾರ್, ಯಮುನ, ಶ್ರೀನಿಧಿ, ಗಿರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
    ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಅರ್ಜುನ್‌ಜನ್ಯ ಸಂಗೀತ ನಿರ್ದೇಶನ, ದೀಪು.ಎಸ್.ಕುಮಾರ್ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಯೋಗಿ ಸಹನಿರ್ದೇಶನವಿರುವ  ‘ದಿಲ್‌ರಂಗೀಲಾಕ್ಕೆ ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ಯೋಗರಾಜ್‌ಭಟ್, ಜಯಂತಕಾಯ್ಕಿಣಿ ಗೀತರಚನೆ ಮಾಡಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ದಿಲ್‌ರಂಗೀಲಾ`ಗೆ ಅದ್ದೂರಿ ಗೀತೆ - Chitratara.com
Copyright 2009 chitratara.com Reproduction is forbidden unless authorized. All rights reserved.