Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಬಹದ್ದೂರ್` ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
Posted date: 10 Thu, Oct 2013 – 08:56:50 AM

ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಶ್ರೀನಿವಾಸ್ ಅವರು ನಿರ್ಮಿಸುತ್ತಿರುವ ‘ಬಹದ್ದೂರ್‘ ಚಿತ್ರಕ್ಕೆ ನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮದ್ದೂರು, ಅನೇಕಲ್ ಮುಂತಾದ ಕಡೆ ನಲವತ್ತು ದಿನಗಳ ಚಿತ್ರೀಕರಣ ನಡೆದಿದೆ.
      ‘ಅದ್ದೂರಿ’ ಚಿತ್ರದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಧ್ರುವಸರ್ಜಾ ಈ ಚಿತ್ರದ ನಾಯಕ. ರಾಧಿಕಾಪಂಡಿತ್ ನಾಯಕಿ. ‘ಅದ್ದೂರಿ’ ನಿರ್ದೇಶಕ ಅರ್ಜುನ್‌ಗೆ ಸಹಾಯಕರಾಗಿ ಹಾಗೂ ರಜನಿಕಾಂತ, ಪುಲಕೇಶಿ, ವರದನಾಯಕ ಮುಂತಾದ ಚಿತ್ರಗಳಿಗೆ ಹಾಡು ಬರೆದಿರುವ ಚೇತನ್‌ಕುಮಾರ್ ಈ ಚಿತ್ರದ ನಿರ್ದೇಶಕ. ‘ಬಹದ್ದೂರ್’ ಚೇತನ್‌ಕುಮಾರ್ ನಿರ್ದೇಶನದ ಚೊಚ್ಚಲ ಚಿತ್ರ.
      ಅರ್ಜುನ್‌ಜನ್ಯರ ಸಂಗೀತವಿರುವ ಈ ಚಿತ್ರಕ್ಕೆ ಶ್ರೀಶ ಕುದುವಳ್ಳಿ ಅವರ ಛಾಯಾಗ್ರಹಣವಿದೆ. ರವಿವರ್ಮ ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಹಾಗೂ ಎ.ಹರ್ಷ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಕೆ.ಪಿ.ಶ್ರೀಕಾಂತ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಬಹದ್ದೂರ್` ಚಿತ್ರಕ್ಕೆ ಬಿರುಸಿನ ಚಿತ್ರೀಕರಣ - Chitratara.com
Copyright 2009 chitratara.com Reproduction is forbidden unless authorized. All rights reserved.