ಎಸ್.ಆರ್.ಎಸ್ ಮಿಡಿಯಾ ವಿಷನ್ ಲಾಂಛನದಲ್ಲಿ ಆನಂದ್ ಛಾಬ್ರಿಯಾ ಅವರು ನಿರ್ಮಿಸಿರುವ ‘ಚಡ್ಡಿದೋಸ್ತ್ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯುಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಇದೇ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪಿ.ಸಿ.ಶೇಖರ್ ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಂಗಾಯಣರಘು ಹಾಗೂ ಸಾಧುಕೋಕಿಲ ಅಭಿನಯಿಸಿದ್ದಾರೆ. ಅಶ್ವಿನಿಗೌಡ, ರೂಪಶ್ರೀ, ಅವಿನಾಶ್, ಮಿತ್ರ, ಅಮಿತ್, ಅಶೋಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಅರ್ಜುನ್ಜನ್ಯರ ಸಂಗೀತವಿರುವ ‘ಚಡ್ಡಿದೋಸ್ತ್ಗೆ ಕುಮಾರನ್ ಅವರ ಛಾಯಾಗ್ರಹಣವಿದೆ. ಶರವಣನ್ ಸಂಕಲನ, ಬಾಬಾ ಭಾಸ್ಕರ್, ಮನು ನೃತ್ಯ ನಿರ್ದೇಶನ, ಗುಣ ಅವರ ಕಲಾನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಅಲೆಮಾರಿ ಸಂತು ರಚಿಸಿದ್ದಾರೆ. ಸಂಭಾಷಣೆಯನ್ನು ಜಿ.ನಟರಾಜ್ ಬರೆದಿದ್ದಾರೆ.