ಔರ ಸಿನಿಮಾಸ್ ಲಾಂಛನದಲ್ಲಿ ಆನಂದರಾಜ್ ಅವರು ನಿರ್ಮಿಸಿರುವ ‘ಅಂಬರ’ ಚಿತ್ರ ನವಂಬರ್ ಎರಡನೇ ವಾರದಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಯೋಗೀಶ್ ನಾಯಕರಾಗಿರುವ ಈ ಚಿತ್ರದ ನಾಯಕಿ ಭಾಮ. ಸಾಧುಕೋಕಿಲಾ, ವಿಶ್ವ, ಬ್ಯಾಂಕ್ ಜನಾರ್ದನ್, ರಾಮಕೃಷ್ಣ, ಜೈಜಗದೀಶ್, ಪದ್ಮಾವಾಸಂತಿ, ಹರೀಶ್ರಾಜ್, ವಿನಾಯಕ ಜೋಶಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸೇನ್ಪ್ರಕಾಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಅಂಬರ’ಕ್ಕೆ ನಾಗರಾಜ್ ಕೋಟೆ ಸಂಭಾಷಣೆ ಬರೆದಿದ್ದಾರೆ. ಅಭಿಮಾನ್ರಾಯ್ ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ, ರವಿಕುಮಾರ್ ಸಂಕಲನ, ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ, ಯೋಗರಾಜ್ ಭರಣಿ ಸಹ ನಿರ್ದೇಶನ, ಅನಿಲ್ ಕುಮಾರ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರಕ್ಕೆ ರಾಜು ಸಹ ನಿರ್ಮಾಪಕರಾಗಿದ್ದಾರೆ.