Chief Editor
Manohar. R (Manu)
Photo Journalist
chitrataramanu@gmail.com
+91 9845549026
ವಿಜಯರಾಘವೇಂದ್ರ ನಿರ್ದೇಶನದಲ್ಲಿ `ಕಿಸ್ಮತ್`
Posted date: 11 Mon, Nov 2013 – 08:55:14 AM

 ತಮ್ಮ ಅಭಿನಯದಿಂದ ಖ್ಯಾತರಾಗಿರುವ ನಟ ವಿಜಯರಾಘವೇಂದ್ರ ‘ಕಿಸ್ಮತ್ ಚಿತ್ರವನ್ನು ನಿರ್ದೇಶಿಸುವುದರ ಮೂಲಕ ನಿರ್ದೇಶಕನ ಸ್ಥಾನ ಅಲಂಕರಿಸುತ್ತಿದ್ದಾರೆ. ಸ್ಪಂದನಸೃಷ್ಠಿ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ನಿರ್ಮಾಪಕರು ವಿಜಯರಾಘವೇಂದ್ರ ಅವರೇ.
     ಇದೇ ತಿಂಗಳ ಹದಿನೈದರಿಂದ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ರಾಜೇಶ್‌ಮುರುಗೇಶನ್ ಸಂಗೀತ ನಿರ್ದೇಶನದ ‘ಕಿಸ್ಮತ್‘ಗೆ ರಾಜೇಶ್‌ಯಾದವ್ ಅವರ ಛಾಯಾಗ್ರಹನವಿದೆ. ದೀಪು.ಎಸ್.ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಹರ್ಷ ನೃತ್ಯ ನಿರ್ದೇಶನ, ಮೋಹನ್ ಪಂಡಿತ್ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ನವೀನ್‌ಕೃಷ್ಣ ಸಂಭಾಷಣೆ ಬರೆದಿದ್ದಾರೆ. ಆನಂದಪ್ರಿಯ ಗೀತರಚನೆ ಮಾಡಿದ್ದಾರೆ.
   ವಿಜಯರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಅತಿಥಿ ಪಾತ್ರದಲ್ಲಿ ಸಾಯಿಕುಮಾರ್ ಅಭಿನಯಿಸುತ್ತಿದ್ದಾರೆ. ದಿಲೀಪ್‌ರಾಜ್, ನಂದ, ತಬಲನಾಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ವಿಜಯರಾಘವೇಂದ್ರ ನಿರ್ದೇಶನದಲ್ಲಿ `ಕಿಸ್ಮತ್` - Chitratara.com
Copyright 2009 chitratara.com Reproduction is forbidden unless authorized. All rights reserved.