ತೂಗುದೀಪ ಪ್ರೊಡಕ್ಷನ್ಸ್ ಲಾಂಛನದಲ್ಲಿ ದರ್ಶನ್ ತೂಗುದೀಪ ಅರ್ಪಿಸುವ, ಮೀನಾ ತೂಗುದೀಪ ಶ್ರೀನಿವಾಸ್ ಅವರು ನಿರ್ಮಿಸಿರುವ ‘ಮದುವೆಯ ಮಮತೆಯ ಕರೆಯೋಲೆ’ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಹಿಂದೆ ತೂಗುದೀಪ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ‘ಜೊತೆ ಜೊತೆಯಲಿ’, ‘ನವಗ್ರಹ’, ‘ಬುಲ್ಬುಲ್’ ಚಿತ್ರಗಳನ್ನು ನಿರ್ಮಿಸಲಾಗಿತ್ತು. ಸಂಸ್ಥೆಯ ನಾಲ್ಕನೇ ಚಿತ್ರವಾಗಿ ‘ಮದುವೆಯ ಮಮತೆಯ ಕರೆಯೋಲೆ’ ನಿರ್ಮಾಣವಾಗಿದೆ. ದಿನಕರ್ ತೂಗುದೀಪ ಅವರು ಸಹ ನಿರ್ಮಾಪಕರಾಗಿರುವ ಈ ಚಿತ್ರವನ್ನು ಕವಿರಾಜ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಹಾಡುಗಳನ್ನು ಕವಿರಾಜ್ ಅವರೆ ಬರೆದಿದ್ದಾರೆ.
ವಿ.ಹರಿಕೃಷ್ಣ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ಮಲ್ಲಿಕಾರ್ಜುನ್ ಬಿ ಸಂಕನಗೌಡರ್ ಸಹ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಕಲೈ, ಮುರಳಿ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಎಂ.ಎ.ಸುಂದರರಾಜ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಅನಂತನಾಗ್, ಅಮೂಲ್ಯ, ಸೂರಜ್, ಅಚ್ಯುತರಾವ್, ಶರತ್ ಲೋಹಿತಾಶ್ವ, ಚಿತ್ರಾ ಶೆಣೈ, ಸಂಗೀತಾ, ಚಿಕ್ಕಣ್ಣ, ಸುಂದರ್, ಶಾಲಿನಿ, ಸ್ವಾತಿ, ಯೋಗೀಶ್ ರಾಜ್, ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮನದೀಪ್ ರಾಯ್, ಶೋಭ್ರಾಜ್ ಮುಂತಾದವರಿದ್ದಾರೆ.