ಜಯಶ್ರೀದೇವಿ ಅರ್ಪಿಸುವ, ಎಂ.ಎನ್.ಕೆ ಮೂವೀಸ್ ಲಾಂಛನದಲ್ಲಿ ಎನ್.ಕುಮಾರ್ ಅವರು ನಿರ್ಮಿಸುತ್ತಿರುವ ‘ಮುಕುಂದ ಮುರಾರಿ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಬೆಂಗಳೂರಿನಲ್ಲಿ ಆರಂಭವಾಯಿತು. ಪ್ರಸ್ತುತ ಬೆಂಗಳೂರಿನಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.
ನಂದಕಿಶೋರ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕಿಚ್ಚ ಸುದೀಪ್ ಹಾಗೂ ಸೂಪರ್ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ. ನಿಖಿತಾ, ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ೭೦ದಿನಗಳ ಚಿತ್ರೀಕರಣ ನಡೆಯಲಿದೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಮೋಹನ್.ಬಿ.ಕೆರೆ ಕಲಾ ನಿರ್ದೇಶನ ಹಾಗೂ ನರಸಿಂಹ ಜಾಲಹಳ್ಳಿ ನಿರ್ಮಾಣ ನಿರ್ವಹಣೆ ‘ಮುಕುಂದ ಮುರಾರಿ ಚಿತ್ರಕ್ಕಿದೆ.