ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್ .
ಈ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ದಾವಾಗಲಿದೆ.
ಮೇ ಅಂತ್ಯ ಹಾಗೂ ಜೂನ್ ಮೊದಲವಾರದಲ್ಲಿ ಕಸ್ತೂರಿ ಮಹಲ್
ಮೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಇದೇ 19ರಂದು A2 ಮ್ಯೂಸಿಕ್ ಮೂಲಕ ಈ ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ.
ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ "ನಾನ್ಯರು ನನಗೆ ಯಾರು" ಎಂಬ ಈ ಹಾಡನ್ನು ಅನುರಾಧಾ ಭಟ್ ಹಾಡಿದ್ದಾರೆ.
ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಮೆಚ್ಚುಗೆ ಸೂಚಿಸಿದ್ದ ಈ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ
ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ .ಪಿ.ಕೆ.ಹೆಚ್ ದಾಸ್* ಛಾಯಾಗ್ರಹಣ ಹಾಗೂ *ಹರೀಶ್ ಕೃಷ್ಣ ಅವರ ಸಂಕಲನ ಕಸ್ತೂರಿ ಮಹಲ್ ಗಿದೆ.