Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕನ್ನಡ ಚಿತ್ರೋದ್ಯಮಕ್ಕೆ ಪ್ಯಾಕೇಜ್; ಸಿಎಂಗೆ ಸುನೀಲ್ ಪುರಾಣಿಕ್ ಅಭಿನಂದನೆ
Posted date: 06 Sun, Jun 2021 08:46:34 PM
ಬೆಂಗಳೂರು, ಜೂ.3- ಕನ್ನಡ ಚಿತ್ರೋದ್ಯಮದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಕರ್ನಾಟಕದಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಶ್ರೀ ಸುನೀಲ್ ಪುರಾಣಿಕ್ ಅಭಿನಂದಿಸಿದ್ದಾರೆ.
 ಕೊರೋನಾ ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡ ಚಿತ್ರೋದ್ಯಮಕ್ಕೆ ಆಸರೆಯಾಗಿ ವಿಶೇಷ ಪ್ಯಾಕೇಜ್ ನೀಡುವಂತೆ ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ ಲೈನ್ ವೆಂಕಟೇಶ್ ಅವರೊಂದಿಗೆ ಮಾನ್ಯ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿಯವರು ಮನವಿಗೆ ಸ್ಪಂದಿಸಿ ಪ್ಯಾಕೇಟ್ ನೀಡಿದ್ದಾರೆ. ಸಂಕಷ್ಟದಲ್ಲಿ ಪ್ಯಾಕೇಜ್ ನೀಡಿದ ಮುಖ್ಯಮಂತ್ರಿಯವರನ್ನು ಗೌರವಪೂರ್ವಕವಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
 ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಘೋಷದೊಂದಿಗೆ ಮಾನ್ಯ ಮುಖ್ಯಮಂತ್ರಿಯವರು ಎಲ್ಲರಿಗೂ ಕೊರೋನಾ ಸಂಕಷ್ಟದಲ್ಲಿ ಕೈಹಿಡಿದಿದ್ದಾರೆ. ಮೊದಲ ಪ್ಯಾಕೇಜ್ ನಲ್ಲಿ ಚಿತ್ರೋದ್ಯಮಕ್ಕೆ ಪ್ಯಾಕೇಜ್ ಕೈತಪ್ಪಿತ್ತು. ಆದರೆ ತಾವು ಮಾಡಿದ ಮನವಿಗೆ ಅವರು ಇದೀಗ ಸ್ಪಂದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
 ಕಳೆದ ವರ್ಷದ ಕೊರೋನಾ ಸಂದರ್ಭದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಮಾನ್ಯ ಮುಖ್ಯಮಂತ್ರಿಯವರು ವಿಶೇಷ ಕಾಳಜಿಯಿಂದ ಆಹಾರ ಸಾಮಗ್ರಿಗಳ ಖರೀದಿಗೆ ಸಂಕಷ್ಟದಲ್ಲಿದ್ದ ಚಿತ್ರರಂಗದ _6500 ಮಂದಿಗೆ ತಲಾ ರೂ.3000 ಮೌಲ್ಯದ ರಿಲೆಯನ್ಸ್ ಕೂಪನ್ ಕೊಡಿಸಿದ್ದರು. ಅಲ್ಲದೆ, ಇತ್ತೀಚಿಗೆ ಚಿತ್ರೋದ್ಯಮದವರಿಗಾಗಿ ವಿಶೇಷವಾಗಿ ಲಸಿಕೆಯನ್ನೂ ನೀಡಿ ಸಹಾಯ ಮಾಡಿದ್ದಾರೆ. ಇದನ್ನು ಕನ್ನಡ ಚಿತ್ರೋದ್ಯಮ ಸ್ಮರಿಸುತ್ತದೆ ಎಂದು ಸುನೀಲ್ ಪುರಾಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕನ್ನಡ ಚಿತ್ರೋದ್ಯಮಕ್ಕೆ ಪ್ಯಾಕೇಜ್; ಸಿಎಂಗೆ ಸುನೀಲ್ ಪುರಾಣಿಕ್ ಅಭಿನಂದನೆ - Chitratara.com
Copyright 2009 chitratara.com Reproduction is forbidden unless authorized. All rights reserved.