Chief Editor
Manohar. R (Manu)
Photo Journalist
chitrataramanu@gmail.com
+91 9845549026
`` ಸೀತಮ್ಮನ ಮಗ`` ನಿಗೆ ಬಿರುಸಿನ ಚಿತ್ರೀಕರಣ
Posted date: 31 Fri, Dec 2021 � 05:04:28 PM
ಸೋನು ಫಿಲಂಸ್ ಲಾಂಛನದಲ್ಲಿ ಕೆ‌.ಮಂಜುನಾಥ್ ನಾಯಕ್  ನಿರ್ಮಿಸುತ್ತಿರುವ, ಯತಿರಾಜ್ ನಿರ್ದೇಶಿಸುತ್ತಿರುವ ``ಸೀತಮ್ಮನ ಮಗ``ಚಿತ್ರಕ್ಕೆ ಚಿತ್ರದುರ್ಗದ ಪಂಡರಹಳ್ಳಿಯಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ಕಳೆದ ಹದಿನೈದು ದಿನಗಳಿಂದ ಅಲ್ಲಿನ ಮನೆ, ಶಾಲೆ ಹಾಗೂ ಸುಂದರ ಪರಿಸರದಲ್ಲಿ ಅನೇಕ ಕಲಾವಿದರ  ಪಾಲ್ಗೊಳ್ಳುವಿಕೆಯಲ್ಲಿ  ಚಿತ್ರೀಕರಣ ಭರದಿಂದ ಸಾಗಿದೆ. 

ಯತಿರಾಜ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ‌ ಮತ್ತು ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಚೈತ್ರಾ ಶ್ರೀನಿವಾಸ್, ಚರಣ್ ಕಾಸಲ, ಸೋನು ಸಾಗರ, ಬುಲೆಟ್ ರಾಜು, ಬಸವರಾಜ್, ಜೀವನ್ ರಾಜ್, ಮಂಜುನಾಥ್ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ವಿನು ಮನಸು ಸಂಗೀತ ‌ನಿರ್ದೇಶನವಿರುವ ಈ ಚಿತ್ರಕ್ಕೆ ಜೀವನ್ ರಾಜ್ ಛಾಯಾಗ್ರಹಣ ಹಾಗೂ ಶಶಿಕುಮಾರ್ ಅವರ ಸಹ ನಿರ್ದೇಶನವಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - `` ಸೀತಮ್ಮನ ಮಗ`` ನಿಗೆ ಬಿರುಸಿನ ಚಿತ್ರೀಕರಣ - Chitratara.com
Copyright 2009 chitratara.com Reproduction is forbidden unless authorized. All rights reserved.