Chief Editor
Manohar. R (Manu)
Photo Journalist
chitrataramanu@gmail.com
+91 9845549026
``ಸೀತಮ್ಮನ ಮಗ`` ನಿಗಾಗಿ ಹಾಡಿದರು ``ಸರಿಗಮಪ`` ದ ಮೆಹಬೂಬ್ ಸಾಬ್
Posted date: 10 Mon, Jan 2022 03:22:29 PM
``ಸರಿಗಮಪ`` ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೆಹಬೂಬ್ ಸಾಬ್ ಅವರು ``ಸೀತಮಮ್ಮನ ಮಗ``ಚಿತ್ರಕ್ಕಾಗಿ ಯತಿರಾಜ್ ಬರೆದಿರುವ`` ಸೀತೆಯೆಂಬ ಹೆಸರಲ್ಲೇನೋ ದೋಷವುಂಟು..ಯುಗಗಳೇ ಕಳೆದರೂನು ಲೋಪವುಂಟು`` ಎಂಬ ಅಮ್ಮನ ಕುರಿತಾದ ಭಾವುಕ ಗೀತೆಯನ್ನು   ಹಾಡಿದ್ದಾರೆ. ವಿನುಮನಸು ಸಂಗೀತ ನೀಡಿರುವ ಈ ಹಾಡಿನ ಧ್ವನಿಮುದ್ರಣ ರೇಣು ಸ್ಟುಡಿಯೋದಲ್ಲಿ ನಡೆಯಿತು.

ಈ ಹಿಂದೆ ನಾನು ಹಾಡಿದ್ದ ಬಿಟ್ಟೋಗ್ ಬೇಡ ನನ್ನ..`` ಗೀತೆಯಂತೆ ಈ ಹಾಡು ಕೂಡ ಜನಪ್ರಿಯತೆ ಪಡೆಯಲಿದೆ. ಇದುವರೆಗೂ ಅಮ್ಮನ ಕುರಿತಾಗಿ ಬಂದಿರುವ ಎಲ್ಲಾ ಹಾಡುಗಳಂತೆ ಈ ಹಾಡು ಕೂಡ ಜನಪ್ರಿಯವಾಲಿ` ಎಂದು ಮೆಹಬೂಬ್ ಸಾಬ್ ಚಿತ್ರತಂಡಕ್ಕೆ ಶುಭಕೋರಿದರು.

 ಸೋನು ಫಿಲಂಸ್ ಲಾಂಛನದಲ್ಲಿ ಕೆ‌.ಮಂಜುನಾಥ್ ನಾಯಕ್  ನಿರ್ಮಿಸುತ್ತಿರುವ ಈ ಚಿತ್ರಚಿತ್ರವನ್ನು ಯತಿರಾಜ್ ನಿರ್ದೇಶಿಸುತ್ತಿದ್ದಾರೆ. 

ಯತಿರಾಜ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ‌ ಮತ್ತು ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಚೈತ್ರಾ ಶ್ರೀನಿವಾಸ್, ಚರಣ್ ಕಾಸಲ, ಸೋನು ಸಾಗರ, ಬುಲೆಟ್ ರಾಜು, ಬಸವರಾಜ್, ಜೀವನ್ ರಾಜ್, ಮಂಜುನಾಥ್ ನಾಯಕ್, ಸಿಂಚನ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

 ಜೀವನ್ ರಾಜ್ ಛಾಯಾಗ್ರಹಣ ಹಾಗೂ ಶಶಿಕುಮಾರ್ ಇಜ್ಜಲಘಟ್ಟ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ಸೀತಮ್ಮನ ಮಗ`` ನಿಗಾಗಿ ಹಾಡಿದರು ``ಸರಿಗಮಪ`` ದ ಮೆಹಬೂಬ್ ಸಾಬ್ - Chitratara.com
Copyright 2009 chitratara.com Reproduction is forbidden unless authorized. All rights reserved.