Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸಸ್ಪೆನ್ಸ್ ಥ್ರಿಲ್ಲರ್ ``ಹತ್ಯ``ತೆರೆಗೆ ಬರಲು ಸಿದ್ದ ...
Posted date: 28 Sun, May 2023 07:53:22 PM
ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ "ಹತ್ಯ". 

ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗುತ್ತದೆ. ಆನಂತರ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ ಇದೇ ಚಿತ್ರದ ಕಥಾಹಂದರ. ಇದೊಂದು ಮಹಿಳಾ ಪ್ರಧಾನ ಚಿತ್ರ  ಎನ್ನುತ್ತಾರೆ ಕಥೆ ಹಾಗೂ ಚಿತ್ರಕಥೆ ಬರೆದಿರುವ ಗಂಗಾಧರ್(ಗಂಗು).

ವರುಣ್ ‌.ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ.

ಸಾಗರಂ ವಲ್ಡ್ ಸಿನಿಮಾ ಲಾಂಛನದಲ್ಲಿ ರಾಮಲಿಂಗಂ, ಶ್ಯಾಮ್ ಹಾಗೂ ಗಂಗಾಧರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅಲೆನ್ ಕ್ರಿಸ್ಟ ಸಂಗೀತ ನಿರ್ದೇಶನ, ಸಂಜೀವ್ ರೆಡ್ಡಿ ಸಂಕಲನ ಹಾಗೂ ಮಾಸ್ ಮಾದ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ವಿಕಾಸ್ ಗೌಡ,  ಕಾಮಿಕಾ ಆಂಚಲ್, ಹ್ಯಾರಿ ಜೋಶ್, ಸಂತೋಷ್ ಮೇದಪ್ಪ, ಶ್ಯಾಮ್, ನಾಗೇಶ್ ಮಯ್ಯ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸಸ್ಪೆನ್ಸ್ ಥ್ರಿಲ್ಲರ್ ``ಹತ್ಯ``ತೆರೆಗೆ ಬರಲು ಸಿದ್ದ ... - Chitratara.com
Copyright 2009 chitratara.com Reproduction is forbidden unless authorized. All rights reserved.