Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಲಾಂಚ್ ಆಯ್ತು ಟ್ರೈಲರ್! ಅಕ್ಟೊಬರ್ 18ರಂದು ಚಿತ್ರ ತೆರೆಗೆ
Posted date: 22 Sun, Sep 2024 08:48:27 AM
ಶೀರ್ಷಿಕೆಯ ಮೂಲಕವೇ ಆರಂಭಿಕವಾಗಿ ಗಮನ ಸೆಳೆದಿದ್ದ ಚಿತ್ರ `ಪ್ರಕರಣ ತನಿಖಾ ಹಂತದಲ್ಲಿದೆ`. ಈಗಾಗಲೇ ಮೋಷನ್ ಪೋಸ್ಟರ್, ಪೋಸ್ಟರ್, ಟೈಟಲ್ ಟ್ರ್ಯಾಕ್ ಸೇರಿದಂತೆ ಒಂದಷ್ಟು ವಿಚಾರಗಳ ಮೂಲಕ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ.
 
ಅಚ್ಚುಕಟ್ಟಾದ ಪತ್ರಿಕಾ ಗೋಷ್ಠಿಯ ಮೂಲಕ ಅನಾವರಣಗೊಂಡ ಟ್ರೈಲರ್ ಆರಂಭಿಕವಾಗಿಯೇ ಮೆಚ್ಚುಗೆ ಪಡೆದುಕೊಂಡಿದೆ. ಒಂದಿಒಡೀ ಚಿತ್ರತಂಡ ಈ ಸಂದರ್ಭದಲ್ಲಿ ಹಾಜರಿದ್ದು, ಸಿನಿಮಾದ ಬಗ್ಗೆ ಒಂದಷ್ಟು ಇಂಟರೆಸ್ಟಿಂಗ್ ಆದ ಮಾಹಿತಿಗಳನ್ನು ಹಂಚಿಕೊಂಡಿದೆ. ಇದರೊಂದಿಗೆ ತನಿಖಾ ಹಂತದಲ್ಲಿರುವ ಪ್ರಕರಣದ ಆಂತರ್ಯದ ಅಂದಾಜೊಂದು ಪ್ರೇಕ್ಷಕರತ್ತ ದಾಟಿಕೊಂಡಿದೆ. ಅಕ್ಟೊಬರ್ 18ರಂದು ಈ ಚಿತ್ರ ಬಿಡುಗಡೆಗೊಳ್ಳಲಿದೆ.
 
ನಿರ್ಮಾಪಕ ಚಿಂತನ್ ಕಂಬಣ್ಣ ಅವರ ತಂದೆ ಡಾ. ಶಿವಣ್ಣ .ಕೆ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ವಿಶೇಷವೆಂದರೆ, ಶಿವಣ್ಣ ಈ ಚಿತ್ರದ ಟೈಟಲ್ ಟ್ರ್ಯಾಕಿಗೆ ಸಾಹಿತ್ಯ ಬರೆದಿದ್ದಾರೆ. ಅದು ಈಗಾಗಲೇ ಬಿಡುಗಡೆಗೊಂದು ಪ್ರೇಕ್ಷಕರನ್ನು ಸೆಳೆದಿದೆ. ಈ ಕಥೆ ತಮ್ಮನ್ನು ಸೆಳೆದ ಬಗ್ಗೆ, ಅದಕ್ಕೆ ಸಾಹಿತ್ಯ ಬರೆದ ಹಿನ್ನೆಲೆಯ ಬಗ್ಗೆ ಒಂದಷ್ಟು ವಿವರಗಳನ್ನು ಶಿವಣ್ಣನವರು ಹಂಚಿಕೊಂಡಿದ್ದಾರೆ. ಇದರೊಂದಿಗೆ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಆ ಬಳಿಕ ನಿರ್ಮಾಪಕ ಚಿಂತನ್ ಕಂಬಣ್ಣ ತಾವು ಈ ಚಿತ್ರದ ಭಾಗವಾದ ಬಗ್ಗೆ ಮಾತಾಡಿದ್ದಾರೆ. ಚಿಂತನ್ ನಟನೆಯತ್ತ ಆಕರ್ಷಿತರಾಗಿ ರಂಗತಂಡಗಳೊಂದಿಗೆ ಸೇರಿಕೊಂಡಾಗ ನಿರ್ದೇಶಕ ಸುಂದರ್ ಎಸ್ ಮತ್ತು ತಂಡದ ಪರಿಚಯವಾಗಿತ್ತಂತೆ. ಆ ಹಂತದಲ್ಲಿ ಸುಂದರ್ ಎಸ್ ಅವರು ರೆಡಿ ಮಾಡಿಟ್ಟುಕೊಂಡಿದ್ದ ಕಥೆಯೊಂದು ಇಷ್ಟವಾಗಿ, ಅದನ್ನು ತಾನೇ ನಿರ್ಮಾಣ ಮಾಡಲು ನಿರ್ಧರಿಸಿದ್ದಾಗಿ ಚಿಂತನ್ ಹೇಳಿಕೊಂಡಿದ್ದಾರೆ.
 
ಇನ್ನು ಈ ಚಿತ್ರದ ಸಾರಥಿ ಸುಂದರ್ ಎಸ್ ಕೂಡಾ ಪ್ರಕರಣ ತನಿಖಾ ಹಂತದಲ್ಲಿದೆ ಚಿತ್ರ ಹುಟ್ಟು ಪಡೆದ ಬಗೆಯನ್ನು ವಿವರಿಸಿದ್ದಾರೆ. ಈ ತಂಡದಲ್ಲಿರುವವರೆಲ್ಲರೂ ರಂಗಭೂಮಿ ಹಿನ್ನೆಲೆಯಿಂದ ಬಂದವರೇ. ನಾಟಕಗಳ ಜೊತೆಗೇ ಸಿನಿಮಾ ಕನಸನ್ನು ಸಾಕಿಕೊಂಡಿದ್ದ ಇವರೆಲ್ಲರೂ ನಾನಾ ಕಥೆಗಳನ್ನು ತಯಾರು ಮಾಡಿಟ್ಟುಕೊಂಡಿದ್ದರು. ಕಡೆಗೂ ಕಥೆಯ ಬಗ್ಗೆ ಗಂಭೀರವಾಗಿ ಚರ್ಚೆ ನಡೆದಾಗ ಈಗಿರುವ ಟ್ರೆಂಡಿಗೆ ಸುಂದರ್ ಎಸ್ ಅವರ ಕಥೆ ಸೂಟ್ ಆಗುತ್ತದೆಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆ ನಂತರ ನಿರ್ಮಾಪಕರನ್ನು ಹುಡುಕೋ ಕೆಲಸದ ನಡುವೆ ಚಿಂತನ್ ಕಂಬಣ್ಣ ತಾನೇ ನಿರ್ಮಾಣ ಮಾಡೋದಾಗಿ ಮುಂದೆ ಬಂದಿದ್ದರು. ಇದೆಲ್ಲದರಿಂದಾಗಿ ಈ
ಸಿನಿಮಾ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದೆ ಎಂಬುದು ನಿರ್ದೇಶಕ ಸುಂದರ್ ಮಾತಿನ ಸಾರ.
 
ಈ ಟ್ರೈಲರ್ ಬಿಡುಗಡೆಯ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಸುಂದರ್ ಎಸ್, ನಿರ್ಮಾಪಕ ಚಿಂತನ್ ಕಂಬಣ್ಣ, ಡಾ. ಶಿವಣ್ಣ, ಮಹಿನ್ ಕುಬೇರ್, ಮುತ್ತುರಾಜ್, ರಾಜ್ ಗಗನ್, ಎಡಿಟರ್ ನಾನಿಕೃಷ್ಣ, ವಿಎಫ್‌ಎಕ್ಸ್ ಮಾಡಿರುವ ಲಕ್ಷ್ಮೀಪತಿ ಎಂ.ಕೆ ಮೊದಲಾದವರು ಹಾಜರಿದ್ದರು. ವಿಶೇಷವೆಂದರೆ, ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿರುವ ಚಿಂತನ್ ಕಂಬಣ್ಣ ಒಂದು ಪಾತ್ರದಲ್ಲಿಯೂ ನಟಿಸಿದ್ದಾರಂತೆ. ಇದೀಗ ಬಿಡುಗಡೆಗೊಂಡಿರುವ ಟ್ರೈಲರ್ ಗೆ ಪ್ರೇಕ್ಷಕರ ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿ ಚಿತ್ರತಂಡವಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಲಾಂಚ್ ಆಯ್ತು ಟ್ರೈಲರ್! ಅಕ್ಟೊಬರ್ 18ರಂದು ಚಿತ್ರ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.