ಖ್ಯಾತ ನಟ ಜಗ್ಗೇಶ್ ಪ್ರಥಮ ನಿರ್ದೇಶನದ ‘ಗುರು’ ಚಿತ್ರಕ್ಕಾಗಿ ರಾಂನಾರಾಯಣ್ ಅವರು ಬರೆದಿರುವ ‘ಪುರಪುರಪುರ ಪುಂಗವ ತರತರತರ ಕಾಣುವ ಮರಮರಮರ ಮಾನವ ಯಾರಿವನು’ ಎಂಬ ಹಾಡಿನ ಹಾಡಿನ ಚಿತ್ರೀಕರಣ ಚೆಲುವನಾರಾಯಣನ ಚೆಂದದೂರಾದ ಮೇಲುಕೋಟೆಯಲ್ಲಿ ನಡೆದಿದೆ. ಪ್ರದೀಪ್ ಅಂತೋಣಿ ನೃತ್ಯ ಸಂಯೋಜಿಸಿದ ಈ ಗೀತೆಗೆ ಗುರು, ರಶ್ಮಿಗೌತಮಿ, ಎಂ.ಎಸ್.ಉಮೇಶ್, ಬೆಂಗಳೂರುನಾಗೇಶ್, ಮುತ್ತುರಾಜ್ ಮುಂತಾದವರು ಹೆಜ್ಜೆ ಹಾಕಿದರು.
ಗುರುರಾಜ ಫಿಲಂಸ್ ಲಾಂಛನದಲ್ಲಿ ಜಗ್ಗೇಶ್ ಹಾಗೂ ಪರಿಮಳಾಜಗ್ಗೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರದ ನಾಯಕರಾಗಿ ಗುರುರಾಜ್ ಅಭಿನಯಿಸುತ್ತಿದ್ದಾರೆ. ಯತಿರಾಜ್, ರಶ್ಮಿಗೌತಮ್, ಗೌತಮಿ, ಶ್ರೀನಿವಾಸಮೂರ್ತಿ, ಶೋಭರಾಜ್, ಕಿಲ್ಲರ್ ವೆಂಕಟೇಶ್, ಶಂಕರ್ ಪಾಟೀಲ್, ಶೈಲಶ್ರೀ, ಅಭಿಜಿತ್, ಜೀವನ್, ಎಂ.ಎಸ್.ಉಮೇಶ್, ಬೆಂಗಳೂರುನಾಗೇಶ್, ಮುತ್ತುರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅಪ್ಪ ನಿರ್ದೇಶಿಸುತ್ತಿರುವ ಚಿತ್ರದಲ್ಲಿ ಪುತ್ರರಾದ ಗುರುರಾಜ್ ಹಾಗೂ ಯತಿರಾಜ್ ಅಭಿನಯಿಸುತ್ತಿರುವುದು ವಿಶೇಷ.
ವಿನಯಚಂದ್ರ ಸಂಗೀತ ನೀಡಿರುವ ಈ ಚಿತ್ರಕ್ಕೆ ರಮೇಶ್ಬಾಬು ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಟಿ.ಎ.ಆನಂದ್ ಸಹ ನಿರ್ದೇಶನ ಹಾಗೂ ರವಿಶಂಕರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.