Chief Editor
Manohar. R (Manu)
Photo Journalist
chitrataramanu@gmail.com
+91 9845549026
ಈ ತಿಂಗಳಲ್ಲೇ `ವರದನಾಯಕ` ತೆರೆಗೆ
Posted date: 03 Mon, Sep 2012 ? 08:52:21 AM

 ಶಂಕರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ವರದನಾಯಕ’ ಚಿತ್ರ ಈ ತಿಂಗಳಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಪಕ ಶಂಕರ್ ತಿಳಿಸಿದ್ದಾರೆ.
    ಅಯ್ಯಪ್ಪ.ಪಿ.ಶರ್ಮ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಕಿಚ್ಚ ಸುದೀಪ್ ಹಾಗೂ ಚಿರಂಜೀವಿ ಸರ್ಜಾ ನಟಿಸಿದ್ದಾರೆ. ನಿಖಿತಾ ಪಾಟೀಲ್, ಸಮೀರಾ ರೆಡ್ಡಿ, ಮುಖ್ಯಮಂತ್ರಿ ಚಂದ್ರು, ಜೈಜಗದೀಶ್, ಶೋಭ್‌ರಾಜ್, ಶರತ್ ಲೋಹಿತಾಶ್ವಾ, ಬುಲೆಟ್ ಪ್ರಕಾಶ್, ಶರಣ್, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
    ರಾಖೇಶ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈಶ್ವರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಮೋಹನ್.ಬಿ.ಕೆರೆ ಕಲಾ ನಿರ್ದೇಶನ ಹಾಗೂ ನರಸಿಂಹ ಮತ್ತು ರಾಮಣ್ಣನವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಈ ತಿಂಗಳಲ್ಲೇ `ವರದನಾಯಕ` ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.